Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ. ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ; ಯೆಹೋವನು ಅವುಗಳನ್ನು ಪರೀಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿನ್ನ ಮಾರ್ಗಗಳು ಯೆಹೋವ ದೇವರ ಮುಂದೆಯೇ ಇವೆ. ಅವರು ನಿನ್ನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:21
21 ತಿಳಿವುಗಳ ಹೋಲಿಕೆ  

ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.


ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.


ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು, ಅವನ ಹೆಜ್ಜೆಗಳನ್ನೆಲ್ಲಾ ನೋಡುವನು.


ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದುಕೊಳ್ಳುತ್ತಿದ್ದೆನು.


ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.


ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”


ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.


ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. ತಾವ್.


ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.


ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ, ನನ್ನ ಪಾಪದ ಮೇಲೆ ಕಾವಲಾಗಿದ್ದೀಯಲ್ಲಾ!


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,


ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು.


ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ತಿಳಿದೇ ಇಲ್ಲ.


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.


ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು