Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾವವಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷರಕ್ತವನ್ನು ಸುರಿಸುವ ಕೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಗರ್ವದ ಕಣ್ಣು, ಸುಳ್ಳಾಡುವ ನಾಲಿಗೆ, ನಿರಪರಾಧಿಗಳನ್ನು ಕೊಲ್ಲುವ ಕೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೆಮ್ಮೆಯ ದೃಷ್ಟಿ, ಸುಳ್ಳಾಡುವ ನಾಲಿಗೆ, ನಿರಪರಾಧಿಯ ರಕ್ತವನ್ನು ಸುರಿಸುವ ಕೈಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:17
34 ತಿಳಿವುಗಳ ಹೋಲಿಕೆ  

ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.


ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.


“ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ,


ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು, ಕಪಟದ ಬಾಯಿ ನಾಶಕರ.


ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?


ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.


ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು.


ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಕಣ್ಣುರೆಪ್ಪೆಗಳನ್ನೆತ್ತಿಕೊಂಡು, ಎಷ್ಟೋ ಮೇಲೆ ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರು ಉಂಟು.


ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.


ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.


ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ, ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ.


ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.


ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.


ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.


ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.


ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.


ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.


ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.


ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.


ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.


ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, ಅವರಿಗೆ ದಂಡನೆ ಖಂಡಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು