Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:13
27 ತಿಳಿವುಗಳ ಹೋಲಿಕೆ  

ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.


ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.


“ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.


ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.


ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ. ಪೆ.


ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ನೀಚನೂ, ದುಷ್ಟನೂ ಆಗಿರುವ ಮನುಷ್ಯನ ನಡತೆಯನ್ನು ನೋಡು, ಅವನು ವಕ್ರ ಮಾತಿನವನಾಗಿದ್ದಾನೆ,


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”


ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.


ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.


ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು.


ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು, ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ. ನೂನ್.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.


ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಾಸಕ್ತನು ಆತನಿಗೆ ಪ್ರಿಯ.


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.


ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.


ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.


ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, ಅವರಿಗೆ ದಂಡನೆ ಖಂಡಿತ.


ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು