Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಸಭಾಧ್ಯಕ್ಷನು ದೇವರ ಕಾರ್ಯಭಾರವನ್ನು ಉಳ್ಳವನಾಗಿರುವುದರಿಂದ ನಿಂದಾರಹಿತನಾಗಿರಬೇಕು; ಅವನು ಗರ್ವಿಷ್ಠನೂ ಮುಂಗೋಪಿಯೂ ಮದ್ಯಪಾನ ಮಾಡುವವನೂ ಹೊಡೆದಾಡುವವನೂ ನೀಚಲಾಭವನ್ನು ಆಶಿಸುವವನೂ ಆಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಾಂಡ್ಯಾಚೊ ಮುಖಂಡ್ ಮಟ್ಲ್ಯಾರ್ ದೆವಾಚ್ಯಾ ಕಾಮಾಚ್ಯಾ ವಿಶಯಾತ್ ಜವಾಬ್ದಾರಿ ಘೆಟಲ್ಲೊ ರ್‍ಹಾತಾ, ತಸೆ ಹೊವ್ನ್ ತೊ ಕಸ್ಲ್ಯಾಬಿ ಚುಕೆತ್ ರ್‍ಹಾವ್ಚೆ ನ್ಹಯ್, ತೊ ಚಿರ್ಡುನ್ ಬೊಲ್ತಲೊ ನಾ ಹೊಲ್ಯಾರ್ ಎಗ್ದಮ್ ರಾಗ್‍ ಕರುನ್ ಘೆತಲೊ, ನಾ ಹೊಲ್ಯಾರ್ ಎಕ್ ಫಿದೊಡೊ ನಾ ಹೊಲ್ಯಾರ್ ಮಂಡ್ ನಾ ಹೊಲ್ಯಾರ್ ಪೈಶಾಂಚಿ ಅಶಾ ಹೊತ್ತೊ ರ್‍ಹಾವ್ಚೊ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:7
23 ತಿಳಿವುಗಳ ಹೋಲಿಕೆ  

ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,


ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.


ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.


ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?


ಒಳಗಿನ ಅಂಗಳವನ್ನು ಪ್ರವೇಶಿಸುವಾಗ, ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿಯಬಾರದು.


ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.


ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.


ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು.


ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ,


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?


ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.


ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.


“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.


ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು