Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, ಜಿತೇಂದ್ರಿಯನೂ ಆಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಆಗಿರಬೇಕು. ಇಂಥವನು ಸ್ವಸ್ಥಚಿತ್ತನೂ ನೀತಿವಂತನೂ ಸದ್ಭಕ್ತನೂ ಆತ್ಮಸಂಯಮವುಳ್ಳವನೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅತಿಥಿಸತ್ಕಾರಮಾಡುವವನೂ ಒಳ್ಳೇದನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ದೇವಭಕ್ತನೂ ಜಿತೇಂದ್ರಿಯನೂ ಆಗಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸಭಾಹಿರಿಯನು ಜನರನ್ನು ತನ್ನ ಮನೆಗೆ ಆಹ್ವಾನಿಸಿ ಅತಿಥಿಸತ್ಕಾರ ಮಾಡಲು ಸಿದ್ಧನಾಗಿರಬೇಕು. ಅವನು ಒಳ್ಳೆಯದನ್ನು ಪ್ರೀತಿಸಬೇಕು; ಜ್ಞಾನಿಯಾಗಿರಬೇಕು; ನ್ಯಾಯವಂತನಾಗಿರಬೇಕು; ಪವಿತ್ರನಾಗಿರಬೇಕು. ಅವನು ತನ್ನನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ, ಅವನು ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಸ್ವಯಂನಿಯಂತ್ರವುಳ್ಳವನೂ ನ್ಯಾಯವಂತನೂ ಪರಿಶುದ್ಧನೂ ಶಿಸ್ತುಳ್ಳವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೊ ಮಾನುಸ್ ಘರಾಕ್ ಯೆಲ್ಲ್ಯಾ ಲೊಕಾಕ್ನಿ ಬರೆ ಕರುನ್ ಬಗ್ತಲೊ ಅನಿ ಜೆ ಕಾಯ್ ಬರೆ ಹಾಯ್ ತೆಚೊ ಪ್ರೆಮ್ ಕರ್‍ತಲೊ ರ್‍ಹಾವ್ಚೊ. ತೊ ಅಪ್ನಿಚ್ ಅಪ್ನಾಕ್ ಸಂಬಾಳ್ತಲೊ, ಬುದ್ದ್ ಹೊತ್ತೊ, ಪವಿತ್ರ್ ಅನಿ ಶಿಸ್ತಿನ್ ರ್‍ಹಾತಲೊ ರ್‍ಹಾವ್ಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:8
17 ತಿಳಿವುಗಳ ಹೋಲಿಕೆ  

ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.


ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;


ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು.


ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.


ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.


ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.


ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ,


ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.


ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.


ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು