Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಿಶ್ವಾಸಿಸಲು ಯೋಗ್ಯವಾದ ಹಾಗೂ ಕ್ರೈಸ್ತತತ್ವಗಳಿಗೆ ಅನುಗುಣವಾದ ಸಿದ್ಧಾಂತಗಳನ್ನು ಅವನು ಭದ್ರವಾಗಿ ಹಿಡಿದವನಾಗಿರಬೇಕು. ಆಗ ಸದ್ಬೋಧನೆಯಿಂದ ಇತರರನ್ನು ಪ್ರೋತ್ಸಾಹಿಸುವುದಕ್ಕೂ ಅದಕ್ಕೆ ವ್ಯತಿರಿಕ್ತವಾಗಿ ನಡೆಯುವವರ ತಪ್ಪುಗಳನ್ನು ಎತ್ತಿತೋರಿಸುವುದಕ್ಕೂ ಆತನು ಸಮರ್ಥನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವದಕ್ಕೂ ಎದುರಿಸುವವರ ಬಾಯಿಕಟ್ಟುವದಕ್ಕೂ ಶಕ್ತನಾಗಿರುವಂತೆ ಕ್ರಿಸ್ತ ಬೋಧಾನುಸಾರವಾದ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ಬೋಧಿಸುವ ಸತ್ಯವಾಕ್ಯವನ್ನು ಅವನು ನಂಬಿಗಸ್ತಿಕೆಯಿಂದ ಅನುಸರಿಸಬೇಕು. ಸತ್ಯವಾದ ಮತ್ತು ಯೋಗ್ಯವಾದ ಬೋಧನೆಯಿಂದ ಅವನು ಜನರಿಗೆ ಸಹಾಯ ಮಾಡುವವನಾಗಿರಬೇಕು. ಅವನು ಸತ್ಯಬೋಧನೆಗೆ ವಿರುದ್ಧವಾದ ಜನರಿಗೆ ಅವರ ತಪ್ಪನ್ನು ತೋರಿಸಿಕೊಡುವ ಸಾಮರ್ಥ್ಯ ಉಳ್ಳವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇತರರನ್ನು ಸ್ವಸ್ಥಬೋಧನೆಯಿಂದ ಪ್ರೋತ್ಸಾಹಿಸುವುದಕ್ಕೂ ಎದುರಿಸುವವರನ್ನು ಖಂಡಿಸುವಂತೆ ಮಾತನಾಡುವುದಕ್ಕೂ ಶಕ್ತನಾಗಿರಲು ಅವನು ಬೋಧಿಸಿದ ಪ್ರಕಾರ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ ತೊ ತ್ಯಾ ಬರೊಸ್ಯಾಕ್ ಯೊಗ್ಯ್ ಅಸಲ್ಲ್ಯಾ ಬರ್‍ಯಾ ಖಬ್ರೆಕ್ ಘಟ್ಟ್ ಧರುನ್ ಘೆವ್ನ್ ರ್‍ಹಾವ್ಚೆ ಮನ್ತಲ್ಯಾ ವಿಶಯಾತ್‍ ಶಿಕ್ವುನ್ ಹೊಲಾ. ಹೆಜ್ಯಾಸಾಟಿ ತೊ ಲೊಕಾಕ್ನಿ ಖರೆಪಾನ್ ಸಿಕ್ವುನ್ಗೆತ್ ತೆಂಕಾ ಉಮ್ಮೆದ್ ಭರಿ ಸಾರ್ಕೆ ಕರುಚೆ, ಕೊನ್ ವಿರೊದ್ ಹೊವ್ನ್ ರ್‍ಹಾತಾ ನ್ಹಯ್, ತೆಂಕಾ ಜೊರ್ ಕರ್‍ತಲೊ ಹೊವ್ನ್ ರ್‍ಹಾವ್ಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:9
24 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ.


ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು.


ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,


ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.


ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.


ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.


ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.


ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.


ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.


ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.


ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.


ನಾನು ಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.


ಆದರೆ ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.


ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ.


ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.


ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.


ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರಿಯಲ್ಲಿಯೂ, ಮನಸ್ಸಾಕ್ಷಿಯು ತಪ್ಪು ತೋರಿಸುವುದಿಲ್ಲ.


ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,


ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು