Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಳುವವರಿಗೂ ಅಧಿಕಾರಿಗಳಿಗೂ ಕ್ರೈಸ್ತವಿಶ್ವಾಸಿಗಳು ವಿಧೇಯರಾಗಿ ನಡೆದುಕೊಳ್ಳಬೇಕೆಂದು ಜ್ಞಾಪಕಪಡಿಸು. ಎಲ್ಲಾ ಸತ್ಕಾರ್ಯಗಳನ್ನು ಕೈಗೊಳ್ಳಲು ಅವರು ಸಿದ್ಧರಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಧಿಪತಿಗಳಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಸಕಲಸತ್ಕಾರ್ಯಗಳನ್ನು ಮಾಡುವದಕ್ಕೆ ಸಿದ್ಧರಾಗಿರಬೇಕೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀನು ಜನರಿಗೆ ತಿಳಿಸಬೇಕಾದದ್ದೇನೆಂದರೆ: ನಿಮ್ಮ ಅಧಿಪತಿಗಳಿಗೂ ಅಧಿಕಾರಿಗಳಿಗೂ ಅಧೀನರಾಗಿರಿ; ಸಕಲ ಸತ್ಕಾರ್ಯಗಳನ್ನು ಮಾಡಲು ಸಿದ್ಧರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಳುವವರಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಸಿದ್ಧರಾಗಿರಬೇಕೆಂತಲೂ ಅವರಿಗೆ ಜ್ಞಾಪಕಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತುಜ್ಯಾ ಲೊಕಾಕ್ನಿ ಅದಿಕಾರ್‍ಯಾಕ್ನಿ ಅನಿ ರಾಜ್ವಟ್ಕಿ ಕರ್ತಲ್ಯಾಕ್ನಿ ಖಾಲ್ತಿ ಹೊವ್ನ್ ಚಲುಚೆ, ಅನಿ ಸಗ್ಳ್ಯಾ ವಾಟೆನ್ ಬರೆ ಹೊತ್ತೆ ಕರುಚೆ ಮನುನ್ ಯಾದ್ ಕರುನ್ ದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:1
29 ತಿಳಿವುಗಳ ಹೋಲಿಕೆ  

ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.


ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.


ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.


ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.


ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಅವರ ಕಡೆಗೆ ಕಿವಿಗೊಡಲೇ ಬಾರದು; ಬಾಬೆಲಿನ ಅರಸನ ಅಡಿಯಾಳಾಗಿರಿ, ಬದುಕುವಿರಿ.


ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.


ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.


ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.


ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.


ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.


ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು