Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:3
37 ತಿಳಿವುಗಳ ಹೋಲಿಕೆ  

ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.


ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,


ಹಿಂದೆ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿದ್ದು ಅವುಗಳನ್ನು ನಡಿಸುತ್ತಿದ್ದಿರಿ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.


ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,


ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.


ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.


ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.


ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು.


ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ.


ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.


ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.


ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.


ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.


ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.


ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.


ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,


ಅವರಲ್ಲಿ ಕೆಲವರು ಮನೆಗಳಲ್ಲಿ ನುಸುಳಿ, ಪಾಪಗಳಿಂದ ತುಂಬಿದವರೂ, ನಾನಾ ವಿಧವಾದ ಆಸೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಆಗಿರುತ್ತಾರೆ.


ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.


ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,


ಆದರೆ ಓನಾನನು ಈ ರೀತಿ ಆಗುವ ಸಂತಾನವು ತನ್ನದಾಗುವುದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಬಾರದೆಂದು ಯೋಚಿಸಿ ತನ್ನ ಅತ್ತಿಗೆಯೊಂದಿಗೆ ಸಂಗಮಿಸುವಾಗೆಲ್ಲಾ ಅವಳು ಗರ್ಭಧರಿಸದಂತೆ ತನ್ನ ವೀರ್ಯವನ್ನು ನೆಲದ ಮೇಲೆ ಸುರಿಸುತಿದ್ದನು.


ತನ್ನ ಯಜಮಾನನು ಮನೆಗೆ ಬರುವ ತನಕ ಆಕೆಯು ಆ ಬಟ್ಟೆಯನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು