Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲಶಾಸ್ತ್ರಗಳಲ್ಲಿಯೂ ವಿದ್ಯೆಗಳಲ್ಲಿಯೂ ಜ್ಞಾನ ವಿವೇಕಗಳನ್ನು ದಯಪಾಲಿಸಿದನು; ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸುವದರಲ್ಲಿ ಪ್ರವೀಣನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಅನೇಕ ಶಾಸ್ತ್ರಗಳನ್ನೂ ವಿಜ್ಞಾನವನ್ನೂ ಕಲಿಯುವ ಬುದ್ಧಿಸಾಮರ್ಥ್ಯಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸಬಲ್ಲವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:17
36 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.


ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.


ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.


ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.


ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮಾತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು.


ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು.


“ಇಗೋ, ನೀನು ದಾನಿಯೇಲನಿಗಿಂತಲೂ ಜ್ಞಾನಿಯಾಗಿರುವೆಯಾ; ನಿನಗೆ ರಹಸ್ಯವಾದುದು ಯಾವುದೇ ಇದ್ದರು ನಿನಗೆ ಮರೆಯಾಗಿರುವುದಿಲ್ಲ?


ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.


ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.


ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.


ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.


ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,


ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.


ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು.


ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.


ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು.


ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು.


ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ.


ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು