ದಾನಿಯೇಲ 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು ಅಂಗದೋಷವಿಲ್ಲದವರಾಗಿರಬೇಕು. ಸುಂದರರು, ಸಮಸ್ತ ಶಾಸ್ತ್ರಜ್ಞರು, ಪಂಡಿತರು, ವಿದ್ಯಾನಿಪುಣರು, ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆಗಿರಬೇಕು. ಅವರಿಗೆ ಬಾಬಿಲೋನ್ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕು,” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅಂಗದೋಷವಿಲ್ಲದವರೂ ಸುಂದರರೂ ಸಮಸ್ತಶಾಸ್ತ್ರಜ್ಞರೂ ಪಂಡಿತರೂ ವಿದ್ಯಾನಿಪುಣರೂ ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕೆಂಬದಾಗಿ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅರಸನಾದ ನೆಬೂಕದ್ನೆಚ್ಚರನು ಆರೋಗ್ಯವಂತರೂ ಅಂಗದೋಷವಿಲ್ಲದವರೂ ಸುಂದರರೂ ಬುದ್ಧಿವಂತರೂ ವಿದ್ಯಾನಿಪುಣರೂ ಆಗಿದ್ದ ಯುವಕರನ್ನು ತನ್ನ ಸನ್ನಿಧಿಸೇವೆಗಾಗಿ ಆರಿಸಿಕೊಂಡು ಅವರಿಗೆ ಕಸ್ದೀಯ ಭಾಷೆಯನ್ನೂ ಬರವಣಿಗೆಯನ್ನೂ ಕಲಿಸಬೇಕೆಂದು ಆಜ್ಞೆ ವಿಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |
ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.