Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪರ್ಷಿಯ ರಾಜ್ಯದ ಕಾವಲುದೂತನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಪ್ರಧಾನ ದೂತರಲ್ಲಿ ಒಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ಅಲ್ಲಿನ ಪರ್ಷಿಯ ರಾಜರ ಸಂಗಡ ಹೋರಾಡಲು ಅವನನ್ನು ಬಿಟ್ಟು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿವಸ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜನ ಸಂಗಡ [ಹೋರಾಡಿ]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಪಾರಸಿಯ ರಾಜ್ಯದ ದಿವ್ಯಪಾಲಕನು ನನ್ನೊಂದಿಗೆ ಕಳೆದ ಇಪ್ಪತ್ತೊಂದು ದಿನಗಳಿಂದ ಹೋರಾಡುತ್ತಿದ್ದನು; ನನಗೆ ತೊಂದರೆ ಕೊಡುತ್ತಿದ್ದನು. ಆಗ ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ನಾನು ಅಲ್ಲಿ ಪಾರಸಿಯ ರಾಜನ ಹತ್ತಿರ ಸಿಕ್ಕಿಹಾಕಿಕೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಪಾರಸಿಯ ರಾಜ್ಯದ ರಾಜಪುತ್ರನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು. ಏಕೆಂದರೆ ನಾನು ಆ ಪಾರಸಿಯ ಅರಸನಿಂದ ತಡೆಹಿಡಿಯಲಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:13
11 ತಿಳಿವುಗಳ ಹೋಲಿಕೆ  

ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.


“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.


ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ ಅಡ್ಡಿ ಮಾಡಿದನು.


ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.


ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.


ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು