Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ಒಂಟಿಯಾಗಿ ಉಳಿದು ಆ ಅದ್ಭುತವನ್ನು ಕಂಡೆ. ನನ್ನ ಶಕ್ತಿಯೆಲ್ಲಾ ಕರಗಿಹೋಯಿತು. ನನ್ನ ಗಾಂಭೀರ್ಯ ಅಳಿಯಿತು. ನಾನು ನಿತ್ರಾಣನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಏಕಾಕಿಯಾಗಿ ಉಳಿದು ಆ ಅದ್ಭುತದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಿತ್ರಾಣನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನೊಬ್ಬನೇ ಅಲ್ಲಿದ್ದೆ. ನಾನು ಆ ದರ್ಶನವನ್ನು ನೋಡುತ್ತಲೇ ಇದ್ದೆ. ಅದರಿಂದ ನನಗೆ ಭಯವಾಯಿತು. ನಾನು ದುರ್ಬಲನಾದೆ. ನನ್ನ ಮುಖವು ಸತ್ತವರ ಮುಖದಂತೆ ಬಿಳುಪೇರಿತು; ನಾನು ನಿಸ್ಸಹಾಯಕನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಒಬ್ಬನೇ ಉಳಿದು, ಈ ಅದ್ಭುತ ದರ್ಶನವನ್ನು ನೋಡಿದೆನು. ನನ್ನಲ್ಲಿ ತ್ರಾಣವು ಇರಲಿಲ್ಲ. ನನ್ನ ಮುಖವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:8
15 ತಿಳಿವುಗಳ ಹೋಲಿಕೆ  

ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.


ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.


ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು.


ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.


ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ, ಅದರ ಮೇಲಣ ಕ್ರೋಧದಿಂದ ಉರಿಯುತ್ತಾ, ಅದರ ಮೇಲೆ ಹಾಯ್ದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದಕ್ಕೆ ಎದುರು ಬೀಳಲು ಟಗರಿಗೆ ಶಕ್ತಿಯಿರಲಿಲ್ಲ. ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದು ಹಾಕಿತು. ಟಗರನ್ನು ಹೋತದಿಂದ ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.


ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.


ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.


ಆಗ ಮೋಶೆ, “ಇದೇನು ಆಶ್ಚರ್ಯ! ಪೊದೆಯು ಸುಟ್ಟು ಹೋಗುತ್ತಿಲ್ಲವಲ್ಲಾ! ಇದನ್ನು ಹತ್ತಿರಕ್ಕೆ ಹೋಗಿ ನೋಡುವೆನು” ಅಂದುಕೊಂಡನು.


ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.


ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತನಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲ” ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು