Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಈಗ ಸತ್ಯಾಂಶವನ್ನು ತಿಳಿಸುತ್ತೇನೆ, ಕೇಳು: ಪರ್ಷಿಯ ದೇಶದಲ್ಲಿ ಇನ್ನೂ ಮೂವರು ರಾಜರು ಏಳುವರು. ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು. ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧ ತನ್ನ ಬಲವನ್ನೆಲ್ಲ ಪ್ರಯೋಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು. ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಈಗ ಸತ್ಯವನ್ನು ತಿಳಿಸುತ್ತೇನೆ. ಪಾರಸಿಯ ದೇಶದಲ್ಲಿ ಇನ್ನೂ ಮೂರು ಅರಸರು ಏಳುವರು. ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು. ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:2
17 ತಿಳಿವುಗಳ ಹೋಲಿಕೆ  

ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು.


ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು.


ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.


ಅವನು ದೊಡ್ಡ ದಂಡೆತ್ತಿ ದಕ್ಷಿಣ ದಿಕ್ಕಿನ ರಾಜನ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯದಿಂದ ಹೊರಡುವನು. ದಕ್ಷಿಣ ದಿಕ್ಕಿನ ರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ನಿಲ್ಲಲಾರನು, ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವನು.


ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.


ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.


ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ.


ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು.


ಆ ಹೋತವು ಗ್ರೀಕ್ ರಾಜ್ಯ, ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.


ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು.


ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.


ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು