Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರ ದಿಕ್ಕಿನ ರಾಜನ ಸೈನ್ಯವು ತುಂಬಿ ತುಳುಕುವುದು. ಬಹಳ ಜನರು ಹತರಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವನ ಮೃಷ್ಟಾನ್ನ ತಿಂದವರೇ ಅವನಿಗೆ ಎರಡು ಬಗೆಯುವರು. ಅವನ ಸೈನ್ಯವು ಕೊಚ್ಚಿಕೊಂಡುಹೋಗುವುದು. ಬಹುಜನರು ಹತರಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರರಾಜನ ಸೈನ್ಯವು ತುಂಬಿತುಳುಕುವದು; ಬಹು ಜನರು ಹತರಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ದಕ್ಷಿಣದ ರಾಜನ ಒಳ್ಳೆಯ ಸ್ನೇಹಿತರೆಂದು ಭಾವಿಸಲಾದ ಜನರು ಅವನನ್ನು ನಾಶಮಾಡಲು ಪ್ರಯತ್ನ ಮಾಡುವರು. ಅವನ ಸೈನ್ಯಕ್ಕೆ ಸೋಲುಂಟಾಗುವದು. ಅವನ ಅನೇಕ ಸೈನಿಕರು ಯುದ್ಧದಲ್ಲಿ ಮಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನ ರಾಜ ಭೋಜನದಲ್ಲಿ ಭಾಗವನ್ನು ತಿಂದವರೇ, ಅವನನ್ನು ನಾಶಮಾಡುವರು. ಅವನ ಸೈನ್ಯವು ತುಂಬಿ ತುಳುಕುವುದು ಮತ್ತು ಅನೇಕರು ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:26
11 ತಿಳಿವುಗಳ ಹೋಲಿಕೆ  

ಆ ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ಆತನು ಉತ್ತರವಾಗಿ ಅವರಿಗೆ “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು.


“ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.


ತುಂಬಿ ತುಳುಕುವ ವ್ಯೂಹಗಳೂ, ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.


ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.


ಹಜಾಯೇಲನು ಎಲೀಷನನ್ನು ಬಿಟ್ಟು ತನ್ನ ಯಜಮಾನನ ಬಳಿಗೆ ಹೋದಾಗ ಅವನು ಇವನನ್ನು, “ಎಲೀಷನು ಏನು ಹೇಳಿದನು?” ಎಂದು ಕೇಳಿದನು. ಅದಕ್ಕೆ ಇವನು, “ನಿನಗೆ ಹೇಗೂ ಸ್ವಸ್ಥವಾಗುವುದು ಎಂದು ಹೇಳಿದನು” ಎಂಬುದಾಗಿ ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು