Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನ ವಿರುದ್ಧವಾಗಿ ಕಿತ್ತೀಮಿನ ಹಡಗುಗಳು ಬರಲು, ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ತನಗೆ ಇಷ್ಟ ಬಂದಂತೆ ಮಾಡುವನು. ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆಯನ್ನು ತೊರೆದವರನ್ನು ಕಟಾಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವನಿಗೆ ವಿರುದ್ಧವಾಗಿ ರೋಮಿನ ಹಡಗುಗಳು ಬರಲು ಅವನು ಎದೆಗುಂದಿ ಹಿಂದಿರುಗುವನು. ಪವಿತ್ರ ಒಡಂಬಡಿಕೆಯ ವಿರುದ್ಧ ಮತ್ಸರಗೊಂಡು ಸಾಧ್ಯವಾದಷ್ಟೂ ಹಾನಿಮಾಡುವನು. ಸ್ವದೇಶಕ್ಕೆ ಹಿಂದಿರುಗಿ ಪವಿತ್ರ ಒಡಂಬಡಿಕೆಯನ್ನು ತೊರೆದವರಿಗೆ ಆದರ ತೋರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನಿಗೆ ವಿರುದ್ಧವಾಗಿ ಕಿತ್ತೀವಿುನ ಹಡಗುಗಳು ಬರಲು ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ಮಾಡುವಷ್ಟು ಮಾಡುವನು; ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆ ತೊರೆದವರನ್ನು ಕಟಾಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಕಿತ್ತೀಮಿನ ಹಡಗುಗಳು ಬಂದು ಉತ್ತರದ ರಾಜನೊಂದಿಗೆ ಯುದ್ಧ ಮಾಡುವವು. ಆ ಹಡಗುಗಳು ಬರುವದನ್ನು ಅವನು ನೋಡಿ ಹೆದರಿಕೊಳ್ಳುವನು. ಅವನು ಪರಿಶುದ್ಧ ನಿಬಂಧನೆಯ ಮೇಲೆ ಕೋಪಿಸಿಕೊಂಡು ಹಿಂತಿರುಗುವನು. ಅವನು ಹಿಂತಿರುಗಿದ ಮೇಲೆ ಪರಿಶುದ್ಧ ನಿಬಂಧನೆಯನ್ನು ತೊರೆದವರಿಗೆ ಸಹಾಯ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಏಕೆಂದರೆ ಕಿತ್ತೀಮಿನ ಹಡಗುಗಳು ಅವನಿಗೆ ವಿರೋಧವಾಗಿ ಬರುವುವು. ಆದ್ದರಿಂದ ಅವನು ಎದೆಗುಂದಿ, ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿ ಕೋಪಿಸಿಕೊಳ್ಳುವನು. ಹಿಂದಿರುಗಿ ಬಂದು ಪರಿಶುದ್ಧ ಒಡಂಬಡಿಕೆಯನ್ನು ತೊರೆದವರಿಗೆ ದಯೆ ತೋರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:30
13 ತಿಳಿವುಗಳ ಹೋಲಿಕೆ  

ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.


ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶನವುಂಟಾಗುವುದು” ಎಂದನು.


ಅನಂತರ ಉತ್ತರ ದಿಕ್ಕಿನ ರಾಜನು ಬಹಳ ಆಸ್ತಿಯನ್ನು ಐಶ್ವರ್ಯವನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು. ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವುದು. ಅವನು ತನಗೆ ಇಷ್ಟ ಬಂದಂತೆ ಮಾಡಿ ಮತ್ತೆ ಸ್ವದೇಶವನ್ನು ಸೇರುವನು.


“ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.


ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.


ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.


ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು.


ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.


ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


ನಿನ್ನ ಹುಟ್ಟುಗೋಲನ್ನು ಬಾಷಾನಿನ ಓಕ್ ಮರದಿಂದ ಮಾಡಿ, ಕಿತ್ತೀಮ್ ದ್ವೀಪದ ಹಲಿಗೆಯಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಕೆತ್ತಿದ್ದಾರೆ.


ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು.


ಯಾವಾನನ ಸಂತಾನದವರು ಯಾರೆಂದರೆ ಎಲೀಷ, ತಾರ್ಷೀಷ್, ಕಿತ್ತೀಮ್, ದೋದಾನೀಮ್ ಎಂಬ ಸ್ಥಳಗಳವರು.


ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣ ದಿಕ್ಕಿನ ದೇಶದ ಮೇಲೆ ನುಗ್ಗುವನು. ಆದರೆ ಮೊದಲು ಆದಂತೆಯೇ ಎರಡನೆಯ ಸಲ ಆಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು