Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅವನು ತನ್ನ ಪೂರ್ವಿಕರ ದೇವರುಗಳನ್ನಾಗಲಿ, ಸ್ತ್ರೀಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನಾಗಲಿ ಲಕ್ಷಿಸುವುದಿಲ್ಲ. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅವನು ತನ್ನ ಪೂರ್ವಜರ ದೇವರನ್ನಾಗಲಿ, ಮಹಿಳೆಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನೇ ಆಗಲಿ, ಲಕ್ಷಿಸನು. ಎಲ್ಲ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅವನು ತನ್ನ ಪಿತೃಗಳ ದೇವರುಗಳನ್ನಾಗಲಿ ಸ್ತ್ರೀಯರು ಮೋಹಿಸುವ ದೇವರನ್ನಾಗಲಿ ಯಾವ ದೇವರನ್ನಾಗಲಿ ಲಕ್ಷಿಸನು. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ಆ ಉತ್ತರದ ರಾಜನು ಅವನ ಪೂರ್ವಿಕರು ಪೂಜಿಸಿದ ದೇವರುಗಳನ್ನೂ ಸ್ತ್ರೀಯರು ಪೂಜಿಸುವ ವಿಗ್ರಹಗಳನ್ನೂ ಲಕ್ಷಿಸನು. ಅವನು ಯಾವ ದೇವರನ್ನೂ ಲಕ್ಷಿಸನು. ಅದಕ್ಕೆ ಬದಲಾಗಿ ಅವನು ತನ್ನನ್ನು ತಾನು ಹೊಗಳಿಕೊಳ್ಳುವನು; ತನ್ನನ್ನು ಎಲ್ಲ ದೇವರುಗಳಿಗಿಂತಲೂ ಶ್ರೇಷ್ಠನೆಂದು ತೋರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅವನು ತನ್ನ ಪಿತೃಗಳ ದೇವರನ್ನಾಗಲೀ, ಸ್ತ್ರೀಯರಿಂದ ಅಪೇಕ್ಷಿಸಿದವರನ್ನಾಗಲೀ ಅವನು ಲಕ್ಷಿಸುವುದಿಲ್ಲ, ಯಾವ ದೇವರನ್ನೂ ಲಕ್ಷಿಸುವುದಿಲ್ಲ; ಆದರೆ ಅವನು ಎಲ್ಲವುಗಳಿಗಿಂತ ಹೆಚ್ಚಿ, ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:37
14 ತಿಳಿವುಗಳ ಹೋಲಿಕೆ  

ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.


ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.


ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.


“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ.


ನಾನು ನನ್ನ ನಲ್ಲನ ನಲ್ಲೆ, ಅವನ ಆಶೆಯು ನನ್ನ ಮೇಲೆ.


ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರ ಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ,


“ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”


ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.


ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.


ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.


“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.


ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪೂರ್ವಿಕರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ವಸ್ತುಗಳಿಂದಲೂ ಸೇವಿಸುವನು.


ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ!


“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು