Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಐಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರ ದೇವರುಗಳನ್ನೂ ಎರಕದ ಬೊಂಬೆಗಳನ್ನೂ ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ ಸೂರೆಮಾಡಿಕೊಂಡು ಈಜಿಪ್ಟಿಗೆ ಹಿಂದಿರುಗುವನು. ಕೆಲವು ವರ್ಷಗಳ ತನಕ ಉತ್ತರರಾಜನ ಗೊಡವೆಗೆ ಹೋಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನ ದೇವರುಗಳನ್ನೂ ಎರಕದ ಬೊಂಬೆಗಳನ್ನೂ ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ ಸೂರೆಮಾಡಿಕೊಂಡು ಐಗುಪ್ತಕ್ಕೆ ಬಂದು ಕೆಲವು ವರುಷಗಳ ತನಕ ಉತ್ತರರಾಜನ ತಂಟೆಗೆ ಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ಅವರ ವಿಗ್ರಹಗಳನ್ನು ತೆಗೆದುಕೊಳ್ಳುವನು. ಅವನು ಅವರ ಲೋಹದ ಪ್ರತಿಮೆಗಳನ್ನು ಮತ್ತು ಅವುಗಳ ಬೆಲೆಬಾಳುವ ಬೆಳ್ಳಿ ಮತ್ತು ಬಂಗಾರದ ವಸ್ತುಗಳನ್ನು ತೆಗೆದುಕೊಳ್ಳುವನು. ಆ ವಸ್ತುಗಳನ್ನೆಲ್ಲಾ ಈಜಿಪ್ಟಿಗೆ ತೆಗೆದುಕೊಂಡು ಹೋಗುವನು. ಆಮೇಲೆ ಕೆಲವು ವರ್ಷಗಳವರೆಗೆ ಅವನು ಉತ್ತರದ ರಾಜನಿಗೆ ಕಿರುಕುಳ ಕೊಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರ ದೇವರುಗಳನ್ನೂ, ಅವರ ವಿಗ್ರಹಗಳನ್ನೂ ಅವರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನೂ ಅವನು ಸೂರೆಮಾಡಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋಗುವನು. ಕೆಲವು ವರ್ಷಗಳವರೆಗೆ ಅವನು ಉತ್ತರದ ಅರಸನ ಮೇಲೆ ಬಿಟ್ಟುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:8
17 ತಿಳಿವುಗಳ ಹೋಲಿಕೆ  

ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.


ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.


ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.


ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು.


ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.


ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.


ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು ಶಿಕ್ಷಿಸಿ, ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು.


ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.


ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.


ಬಳಿಕ ಉತ್ತರ ದಿಕ್ಕಿನ ರಾಜನು ದಕ್ಷಿಣ ದಿಕ್ಕಿನ ರಾಜನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗುವನು.


ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು