Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ಯಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ರಾಜರು ಕೇಳುತ್ತಿರುವ ಸಂಗತಿ ಅತಿಕಷ್ಟವಾದುದು. ನರಮಾನವರ ನಡುವೆ ವಾಸಮಾಡದ ದೇವರುಗಳೇ ಹೊರತು ಇನ್ನಾರೂ ರಾಜರ ಸಮ್ಮುಖದಲ್ಲಿ ಇದನ್ನು ತಿಳಿಸಲಾರರು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ರಾಜನು ಕೇಳುವ ಸಂಗತಿಯು ಅತಿಕಷ್ಟವಾದದು; ನರಜನ್ಮದವರ ಮಧ್ಯೆ ವಾಸಿಸದ ದೇವರುಗಳೇ ಹೊರತು ಇನ್ನಾರೂ ರಾಜನ ಸಮ್ಮುಖದಲ್ಲಿ ತಿಳಿಸಲಾರರು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮಹಾಪ್ರಭುಗಳು ಕೇಳುವ ವಿಷಯ ಅತಿ ಕಠಿಣವಾದದ್ದು. ದೇವತೆಗಳು ಮಾತ್ರ ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸಲು ಸಾಧ್ಯ. ಆದರೆ ದೇವತೆಗಳು ಮಾನವರೊಂದಿಗೆ ವಾಸಮಾಡುವುದಿಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅರಸನು ಕೇಳುವ ಸಂಗತಿಯು ಕಷ್ಟಕರವಾದದ್ದು. ಮಾನವರ ಮಧ್ಯದಲ್ಲಿ ವಾಸಿಸದ ದೇವರುಗಳೇ ಹೊರತು, ಬೇರಾರೂ ಇದನ್ನು ಅರಸನ ಸನ್ನಿಧಿಯಲ್ಲಿ ತಿಳಿಸಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:11
25 ತಿಳಿವುಗಳ ಹೋಲಿಕೆ  

“ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.


ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.


ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು.


ಫರೋಹನು ಯೋಸೇಫನಿಗೆ, “ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.


ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. ಯೆಹೋವನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.


ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.


ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ.


ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.


ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?


ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’”


ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.


ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.


ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.


“ನೆಬೂಕದ್ನೆಚ್ಚರನಾದ ನಾನು ನನ್ನ ಆಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸುಖವಾಗಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು