Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದನ್ನು ಕೇಳಿ ರಾಜನು ಉಗ್ರಕೋಪಗೊಂಡನು. ಬಾಬಿಲೋನಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದನ್ನು ಕೇಳಿ ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇದನ್ನು ಕೇಳಿ ಅರಸನು ಬಹಳ ಕೋಪಗೊಂಡು ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದನ್ನು ಕೇಳಿ ಅರಸನು ಕೋಪ ಮತ್ತು ರೌದ್ರವುಳ್ಳವನಾಗಿ, ಬಾಬಿಲೋನಿನಲ್ಲಿರುವ ಎಲ್ಲಾ ಜ್ಞಾನಿಗಳನ್ನು ಕೊಲೆಮಾಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:12
14 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.


ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.


ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು.


ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.


ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.


ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು.


ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.


ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.


ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ, “ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು” ಎಂದು ಹೇಳಿದನು.


ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು