Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ರಾಜಾಜ್ಞೆಯು ಖಡಾಖಂಡಿತವಾಗಿದ್ದರಿಂದಲೂ ಆವಿಗೆಯ ಕಾವು ಅತಿ ತೀಕ್ಷ್ಣವಾಗಿದ್ದರಿಂದಲೂ ಅಗ್ನಿಕುಂಡವು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಎತ್ತಿ ತಂದವರನ್ನೇ ಭಸ್ಮಮಾಡಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗಾಗಲು ರಾಜಾಜ್ಞೆಯು ಖಂಡಿತವಾಗಿದದ್ದರಿಂದಲೂ ಆವಿಗೆಯ ಕಾವು ಅತಿತೀಕ್ಷ್ಣವಾಗಿದ್ದದರಿಂದಲೂ ಅಗ್ನಿಜ್ವಾಲೆಯು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಎತ್ತಿಹಾಕಿದವರನ್ನೇ ಸಂಹರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಜ್ಞೆಯನ್ನು ಕೊಟ್ಟಾಗ ಅರಸನು ತುಂಬ ಕೋಪದಲ್ಲಿದ್ದನು. ಆದ್ದರಿಂದ ತಕ್ಷಣ ಕುಲುಮೆಯಲ್ಲಿ ಅತಿ ಹೆಚ್ಚು ಬೆಂಕಿಯನ್ನು ಉರಿಸಲಾಯಿತು. ಆ ಜ್ವಾಲೆ ಎಷ್ಟು ಭಯಂಕರವಾಗಿತ್ತೆಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕುಲುಮೆಯಲ್ಲಿ ಎಸೆಯಲು ಹೋದ ಶಕ್ತಿಶಾಲಿಗಳಾದ ಸೈನಿಕರೇ ಅದರ ತಾಪಕ್ಕೆ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅರಸನ ಆಜ್ಞೆಯು ಅವಸರವಾಗಿಯೂ, ಕುಲುಮೆಯು ಬಹು ಉರಿಯಾಗಿಯೂ ಇದ್ದುದರಿಂದ, ಬೆಂಕಿಯ ಜ್ವಾಲೆಯು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಬೆಂಕಿಗೆ ಹಾಕಲು ಎತ್ತಿದ ಆ ಸೈನಿಕರನ್ನೇ ಸಂಹರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:22
10 ತಿಳಿವುಗಳ ಹೋಲಿಕೆ  

ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು.


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.


ಐಗುಪ್ತರು, “ನಾವೆಲ್ಲರು ಸಾಯುತ್ತೇವೆ” ಎಂದುಕೊಂಡು ಇಸ್ರಾಯೇಲರನ್ನು ತಮ್ಮ ದೇಶದಿಂದ ಬೇಗನೇ ಕಳುಹಿಸಿಬಿಡುವುದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲವಂತಮಾಡಿದರು.


ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.


ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.


“ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?” ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.


ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು