Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಾಲ್ಕನೆಯವನ ರೂಪ ದೇವಪುತ್ರನ ರೂಪದಂತಿದೆ!” ಎಂದು ಹೇಳಿ ಧಗಧಗನೆ ಉರಿಯುತ್ತಿದ್ದ ಆವಿಗೆಯ ಬಾಯಿಯ ಬಳಿಗೆಹೋಗಿ, “ಪರಾತ್ಪರ ದೇವರ ದಾಸರಾದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರೇ, ಬನ್ನಿ, ಹೊರಗೆ ಬನ್ನಿ,” ಎಂದು ಕೂಗಿಕೊಂಡನು. ಅಂತೆಯೇ ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಅವರು ಬೆಂಕಿಯಿಂದ ಹೊರಟುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಧಗಧಗನೆ ಉರಿಯುವ ಆವಿಗೆಯ ಬಾಯಿಯ ಬಳಿಗೆ ಹೋಗಿ - ಪರಾತ್ಪರದೇವರ ಸೇವಕರಾದ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ, ಎಂದು ಕೂಗಲು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರು ಬೆಂಕಿಯೊಳಗಿಂದ ಹೊರಟು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ನೆಬೂಕದ್ನೆಚ್ಚರನು ಉರಿಯುವ ಕೊಂಡದ ಬಾಯಿಯ ಬಳಿಗೆ ಹೋಗಿ, “ಮಹೋನ್ನತನಾದ ದೇವರ ಸೇವಕರಾದ ಶದ್ರಕ್, ಮೇಶಕ್, ಅಬೆದ್‌ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ” ಎಂದು ಕೂಗಿದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಬೆಂಕಿಯೊಳಗಿಂದ ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:26
22 ತಿಳಿವುಗಳ ಹೋಲಿಕೆ  

‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.


ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.


ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.


ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.


ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.


ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.


ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ. ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು. ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು.


ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು.


ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.


ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.


ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಅವರು ನಮಗೆ, ‘ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ಪುನಃ ಕಟ್ಟುತ್ತಿದ್ದೇವೆ. ಇಸ್ರಾಯೇಲರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿದ್ದನು.


ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.


ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.


ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.


ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.


ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು