Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜಗದಲ್ಲಿ ವಾಸಿಸುವ ಎಲ್ಲಾ ಜನಾಂಗದವರಿಗೂ ಕುಲದವರಿಗೂ ಭಾಷೆಯವರಿಗೂ ರಾಜ ನೆಬೂಕದ್ನೆಚ್ಚರನು ಹೊರಡಿಸಿದ ಪ್ರಕಟಣೆ - “ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗಕುಲಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಲೋಕದಲ್ಲೆಲ್ಲ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳ ಜನರಿಗೆ ಅರಸನಾದ ನೆಬೂಕದ್ನೆಚ್ಚರನು ಈ ಪತ್ರವನ್ನು ಕಳುಹಿಸಿದನು. ಶುಭಾಶಯಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ, ಜನಾಂಗಗಳಿಗೂ, ಭಾಷೆಯವರಿಗೂ, ನಿಮಗೆ ಶಾಂತಿಯು ಹೆಚ್ಚಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:1
16 ತಿಳಿವುಗಳ ಹೋಲಿಕೆ  

ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.


ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಲಿ.


ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.


ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.


ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.


ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.


ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.


ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.


ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.


ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”


ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.


ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.


ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶವೇನೆಂದರೆ, “ದಾರ್ಯಾವೆಷ್ ರಾಜರಿಗೆ ಹೃತ್ಪೂರ್ವಕ ನಮಸ್ಕಾರಗಳು, ತಮ್ಮ ಕ್ಷೇಮ ಅಪೇಕ್ಷಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು