Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ಏಳುವರ್ಷ ಕಾಲ, ಮನುಷ್ಯ ಹೃದಯ ಹೋಗಿ ಮೃಗದ ಹೃದಯ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದಕ್ಕೆ ಮಾನುಷಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರುಷ ಕಳೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅದು ಮನುಷ್ಯನಂತೆ ವಿಚಾರ ಮಾಡುವುದನ್ನು ಬಿಟ್ಟು ಪ್ರಾಣಿಯಂತೆ ವಿಚಾರ ಮಾಡತೊಡಗಲಿ. ಅದು ಈ ಸ್ಥಿತಿಯಲ್ಲಿ ಏಳು ವರ್ಷವಿರಲಿ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನಿಗೆ ಏಳು ವರ್ಷಕಾಲ, ಮನುಷ್ಯ ಹೃದಯ ಹೋಗಿ ಮೃಗದ ಹೃದಯ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:16
13 ತಿಳಿವುಗಳ ಹೋಲಿಕೆ  

“ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.


ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.


ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.


ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.


ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ತರುವಾಯ ಉತ್ತರ ದಿಕ್ಕಿನ ರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿ ಬಹಳ ವರ್ಷಗಳ ನಂತರ ಮಹಾ ಸೈನ್ಯದಿಂದಲೂ, ಅಧಿಕ ಆಯುಧಗಳ ಸಮೇತವಾಗಿಯೂ ಬರುವನು.


ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಲು ಅವನು, “ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ” ಎಂದು ಉತ್ತರ ಕೊಟ್ಟನು.


ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು