Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪರಾತ್ಪರ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸುವುದು ನನಗೆ ವಿಹಿತವೆಂದು ತೋರಿಬಂದಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಪರಾತ್ಪರದೇವರು ನನ್ನ ವಿಷಯದಲ್ಲಿ ನಡಿಸಿರುವ ಮಹತ್ತುಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮಹೋನ್ನತನಾದ ದೇವರು ನನಗೋಸ್ಕರ ಮಾಡಿದ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ನಿಮಗೆ ತಿಳಿಸಲು ನನಗೆ ಬಹಳ ಸಂತೋಷವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮಹೋನ್ನತ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂದು ನನಗೆ ವಿಹಿತವಾಗಿ ತೋರಿ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:2
19 ತಿಳಿವುಗಳ ಹೋಲಿಕೆ  

ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.


ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.


ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.


ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.


ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು.


ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.


ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.


“ರಾಜನೇ ಇದರ ತಾತ್ಪರ್ಯವೇನೆಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನಾದ ದೇವರ ತೀರ್ಪು ಹೀಗಿದೆ.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.


ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.


ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.


ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”


ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


ನೀನು ಸ್ವಪ್ನಗಳಿಂದ ನನ್ನನ್ನು ಬೆದರಿಸಿ, ದರ್ಶನಗಳ ಮೂಲಕ ಭಯಪಡಿಸುವಿ.


ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.


ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು