ದಾನಿಯೇಲ 4:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟೆಂಬುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆ ಮರದ ಬುಡದ ಮೋಟನ್ನು ಉಳಿಸಿರೆಂದು ಅಪ್ಪಣೆಯಾಗಿದೆ. ಇದರ ತಾತ್ಪರ್ಯವೇನೆಂದರೆ: ಪರಲೋಕದ ದೇವರಿಗೆ ಸರ್ವಾಧಿಕಾರ ಉಂಟೆಂಬುದನ್ನು ತಾವು ಅರಿತುಕೊಂಡ ನಂತರ ನಿಮ್ಮ ರಾಜ್ಯ ನಿಮಗೆ ಸ್ಥಿರವಾಗಿ ದೊರಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನಂದರೆ ಪರಲೋಕಕ್ಕೆ ಸರ್ವಾಧಿಕಾರವುಂಟೆಂಬದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಮರದ ಬುಡದ ಮೋಟನ್ನು ಮತ್ತು ಅದರ ಬೇರುಗಳನ್ನು ಭೂಮಿಯಲ್ಲಿಯೇ ಬಿಟ್ಟುಬಿಡಿ ಎಂಬುದರ ಅರ್ಥವೇನೆಂದರೆ, ನಿನ್ನ ರಾಜ್ಯವನ್ನು ನಿನಗೆ ಹಿಂತಿರುಗಿಸಲಾಗುವುದು. ಮಹೋನ್ನತನಾದ ದೇವರು ನಿನ್ನ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಎಂಬುದನ್ನು ನೀನು ತಿಳಿದುಕೊಂಡ ಬಳಿಕ ಹೀಗಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂಬ ಆಜ್ಞೆಯ ಅರ್ಥ ಏನೆಂದರೆ, ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಪುನಃಸ್ಥಾಪನೆಯಾಗುವುದು. ಅಧ್ಯಾಯವನ್ನು ನೋಡಿ |
“ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.