Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:34
57 ತಿಳಿವುಗಳ ಹೋಲಿಕೆ  

ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.


ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.


“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.


ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು.


ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.


ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟೆಂಬುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.


ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.


ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”


ಪರಾತ್ಪರನಾದ ದೇವರ ಬಾಯಿಯ ಮಾತಿನಿಂದಲೇ ಮೇಲು ಮತ್ತು ಕೇಡುಗಳು ಸಂಭವಿಸುತ್ತವಲ್ಲಾ.


ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ. ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು.


ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ!


ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.


ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?


ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.


ನನ್ನ ಆಯುಷ್ಯವನ್ನು ಕಡಿಮೆ ಮಾಡಿಬಿಟ್ಟಿದ್ದಾನೆ. ಆದುದರಿಂದ, “ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ; ನಿನ್ನ ವರ್ಷಗಳು ತಲತಲಾಂತರಕ್ಕೂ ಇರುತ್ತವೆ.


ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.


ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.


ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.


ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.


ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ, ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.


ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.


ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.


ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.


ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.


“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.


ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ,


ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,


ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.


ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.


ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.


ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.


ಹೀಗಿರಲು, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, “ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟದಿಂದ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದಿಯಲ್ಲಾ” ಎಂದು ಬಿನ್ನವಿಸಿದರು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.


ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.


ಆದುದರಿಂದ ನಮ್ಮ ದೇವರೇ ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ, ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.


ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. ಸೆಲಾ


ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.


ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.


ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು