Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೀಗಿರುವಲ್ಲಿ ಭಯಂಕರವಾದ ಕನಸೊಂದನ್ನು ಕಂಡೆ. ನಿದ್ರೆಯಲ್ಲಿ ನನಗೆ ತೋಚಿದ ಆಲೋಚನೆಗಳು ಹಾಗು ಮನಸ್ಸಿಗೆ ಬಿದ್ದ ಸ್ವಪ್ನಗಳು ನನ್ನನ್ನು ಕಳವಳಕ್ಕೆ ಈಡುಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನನಗೊಂದು ಕನಸು ಬಿತ್ತು. ಅದು ನನ್ನಲ್ಲಿ ಭಯವನ್ನುಂಟುಮಾಡಿತು. ನಾನು ನನ್ನ ಹಾಸಿಗೆಯ ಮೇಲೆ ಮಲಗಿದ್ದೆ. ಅನೇಕ ಚಿತ್ರಗಳನ್ನು ಮತ್ತು ದೃಶ್ಯಗಳನ್ನು ಕಂಡೆ. ಅವುಗಳು ನನ್ನಲ್ಲಿ ಹೆಚ್ಚಿನ ಭಯವನ್ನುಂಟುಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:5
15 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.


ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.


ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, “ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!


ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.


ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು.


ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ. ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.


ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.


ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.


ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ; ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಭೂಮಿಯ ಹುಲ್ಲು ಮೃಗಗಳಿಗೆ ಗತಿಯಾದಂತೆ ಅದಕ್ಕೆ ಗತಿಯಾಗಲಿ.


“ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು