Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:10
26 ತಿಳಿವುಗಳ ಹೋಲಿಕೆ  

ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.


“ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.


ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.


ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,


“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.


ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”


ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,


ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.


ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು.


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.


ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.


ಆತನ ಮೂಗಿನಿಂದ ಹೊಗೆಯು ಎದ್ದು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು, ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.


“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ?


ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು