Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಮನುಷ್ಯಕುಮಾರನಂತಿರುವ ಆ ವ್ಯಕ್ತಿಗೆ ದೊರೆತನ, ಮಹಿಮೆ ಮತ್ತು ಆಳುವ ಸಂಪೂರ್ಣ ಅಧಿಕಾರವನ್ನು ಕೊಡಲಾಯಿತು. ಸಕಲ ಜನರು, ಜನಾಂಗಗಳು ಮತ್ತು ಎಲ್ಲ ಭಾಷೆಯ ಜನರು ಆತನನ್ನು ಸೇವಿಸುವರು. ಆತನ ಅಧಿಕಾರವು ಶಾಶ್ವತ, ಆತನ ರಾಜ್ಯವು ಎಂದಿಗೂ ಅಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:14
41 ತಿಳಿವುಗಳ ಹೋಲಿಕೆ  

ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.


ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.


ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು.


ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.


ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.


ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.


ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ!


ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.


ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.


ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.


ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.


ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;


ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”


ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ” ಎಂದು ಹೇಳುವುದು.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.


ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.


ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು.


ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.


ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು