Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ದೇವಭಕ್ತರು ರಾಜ್ಯವನ್ನು ಆಳುವರು. ಅವರು ಸಮಸ್ತ ಭೂಮಂಡಲದ ರಾಜ್ಯಗಳ ಮೇಲೆ ಆಳ್ವಿಕೆ ಮಾಡುವರು. ಈ ಸಾಮ್ರಾಜ್ಯವು ಕೊನೆಯವರೆಗೂ ಉಳಿಯುವುದು. ಮಿಕ್ಕ ಎಲ್ಲ ರಾಜ್ಯಗಳ ಜನರು ಅವರನ್ನು ಗೌರವಿಸುವರು ಮತ್ತು ಸೇವಿಸುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:27
29 ತಿಳಿವುಗಳ ಹೋಲಿಕೆ  

ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು.


ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.


ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”


ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.


ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.


ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.


ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.


ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.


ತರುವಾಯ ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, “ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು.


ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.


“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು