Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು” ಎಂದು ಮನುಷ್ಯ ಧ್ವನಿಯಂತಹ ಒಂದು ವಾಣಿಯು ಊಲಾ ಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು,” ಎಂದು ಮನುಷ್ಯ ಧ್ವನಿಯಂಥ ಒಂದು ವಾಣಿ ಊಲಾ ಕಾಲುವೆಯ ನಡುವೆ ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ - ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು ಎಂದು ಮನುಷ್ಯಧ್ವನಿಯಂಥ ಒಂದು ವಾಣಿಯು ಊಲಾಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ನಾನು ಮನುಷ್ಯನ ಧ್ವನಿಯನ್ನು ಕೇಳಿದೆ. ಈ ಧ್ವನಿಯು ಊಲಾ ನದಿಯ ಮೇಲಿಂದ ಬಂದಿತು. ಆ ಧ್ವನಿಯು, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಈ ಮನುಷ್ಯನಿಗೆ ತಿಳಿಸು” ಎಂದು ಆದೇಶ ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ, “ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು,” ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:16
16 ತಿಳಿವುಗಳ ಹೋಲಿಕೆ  

ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ, ನಜರೇತೆಂಬ ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು;


ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.


ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


“ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ಅವನಿಗೆ ಒಂದು ವಾಣಿ ಕೇಳಿಸಿತು.


ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ, ಯಾರನ್ನೂ ಕಾಣದೆ ಮೂಕರಂತೆ ವಿಸ್ಮಿತರಾಗಿ ನಿಂತರು.


“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.


ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.


ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”


ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.


ನನ್ನ ಸಂಗಡ ಮಾತನಾಡುತ್ತಿದ್ದ ಶಬ್ದವು ಯಾರದೆಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ


ನಾನು ಹತ್ತಿರ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸತ್ಯಾರ್ಥವೇನೆಂದು ವಿಚಾರಿಸಲು ಅವನು ನನಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು