Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯುಕ್ತಿಯಿಂದಲೆ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಮನದಲ್ಲೆ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸುವನು. ರಾಜಾಧಿರಾಜನಿಗೂ ವಿರುದ್ಧವಾಗಿ ಏಳುವನು. ಆದರೂ ಯಾರ ಕೈಯೂ ಸೋಕದೆ ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸಿ ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:25
21 ತಿಳಿವುಗಳ ಹೋಲಿಕೆ  

ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.


ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


ಕ್ಷಣ ಮಾತ್ರದೊಳಗೆ ಸಾಯುವರು; ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು.


ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”


ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು.


ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.


ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.


“ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.


ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.


ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು