Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ದಾನಿಯೇಲನಾದ ನಾನು ಬೆಂಡಾಗಿ ಕೆಲವು ದಿವಸ ಕಾಯಿಲೆಬಿದ್ದೆನು; ಆಮೇಲೆ ಎದ್ದು ರಾಜಕಾರ್ಯವನ್ನು ನಡಿಸಿದೆನು; ಆ ಕನಸಿಗೆ ಬೆಚ್ಚಿಬೆರಗಾದೆನು; ಅದು ಯಾರಿಗೂ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದಾನಿಯೇಲನೆಂಬ ನಾನು ಬಹಳ ಅಶಕ್ತನಾದೆನು. ಆ ದರ್ಶನದ ತರುವಾಯ ಹಲವಾರು ದಿವಸ ನಾನು ಕಾಯಿಲೆ ಬಿದ್ದೆನು. ಆಮೇಲೆ ನಾನು ಗುಣಹೊಂದಿ ರಾಜಕಾರ್ಯವನ್ನು ಪ್ರಾರಂಭಿಸಿದೆನು. ಆದರೆ ಆ ದರ್ಶನದಿಂದ ನನ್ನ ಮನಸ್ಸು ಕಲಕಿತು. ಆ ದರ್ಶನದ ಅರ್ಥವೇನೆಂಬುದು ನನಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದಾನಿಯೇಲನಾದ ನಾನು ಬಳಲಿ ಕೆಲವು ದಿನಗಳವರೆಗೂ ಅಸ್ವಸ್ಥನಾದೆನು. ಅನಂತರ ನಾನು ಎದ್ದು, ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು. ನಾನು ಆ ದರ್ಶನದ ಬಗ್ಗೆ ಬೆಚ್ಚಿಬೆರಗಾದೆನು. ಅದರ ಅರ್ಥವನ್ನೇ ಗ್ರಹಿಸಿಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:27
12 ತಿಳಿವುಗಳ ಹೋಲಿಕೆ  

ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.


ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.


ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.


ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು.


ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ, ಅದರ ಮೇಲಣ ಕ್ರೋಧದಿಂದ ಉರಿಯುತ್ತಾ, ಅದರ ಮೇಲೆ ಹಾಯ್ದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದಕ್ಕೆ ಎದುರು ಬೀಳಲು ಟಗರಿಗೆ ಶಕ್ತಿಯಿರಲಿಲ್ಲ. ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದು ಹಾಕಿತು. ಟಗರನ್ನು ಹೋತದಿಂದ ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.


ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.


ಅನಂತರ ಸಮುವೇಲನು ಮಲಗಿ ಮುಂಜಾನೆಯಲ್ಲೇ ಎದ್ದು ಯೆಹೋವನ ಮಂದಿರದ ಬಾಗಿಲುಗಳನ್ನು ತೆರೆದನು. ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವುದಕ್ಕೆ ಭಯಪಟ್ಟನು.


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು