Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿನ್ನ ವಿಜ್ಞಾಪನೆಯ ಆರಂಭದಲ್ಲೇ ದೇವರ ಅಪ್ಪಣೆಯಾಯಿತು. ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ. ನೀನು ದೇವರಿಗೆ ಅತಿ ಪ್ರಿಯನು. ಈ ದೈವೋಕ್ತಿಯನ್ನು ಆಲೋಚಿಸು; ಈ ದರ್ಶನವನ್ನು ಗ್ರಹಿಸಿಕೊ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು (ದೇವರಿಗೆ) ಅತಿಪ್ರಿಯ; ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀನು ಪ್ರಾರ್ಥಿಸಲು ಪ್ರಾರಂಭಿಸಿದಾಗಲೇ ನನಗೆ ದೇವರ ಆಜ್ಞೆಯಾಯಿತು. ನಾನು ಅದನ್ನು ನಿನಗೆ ತಿಳಿಸಲು ಬಂದಿರುವೆನು. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನೀನು ದೈವಾಜ್ಞೆಯನ್ನು ಅರಿತುಕೊಳ್ಳುವೆ ಮತ್ತು ದರ್ಶನದ ಅರ್ಥವನ್ನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀನು ವಿಜ್ಞಾಪನೆ ಮಾಡಿದ ಕೂಡಲೇ ಉತ್ತರ ಸಿಕ್ಕಿತು. ಅದನ್ನು ನಿನಗೆ ತಿಳಿಸುವುದಕ್ಕೆ ನಾನು ಬಂದಿದ್ದೇನೆ. ಏಕೆಂದರೆ ನೀನು ಅತಿ ಪ್ರಿಯನಾಗಿರುವೆ. ಆದ್ದರಿಂದ ವಿಷಯವನ್ನು ಗ್ರಹಿಸಿಕೊಂಡು ದರ್ಶನವನ್ನು ತಿಳಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:23
12 ತಿಳಿವುಗಳ ಹೋಲಿಕೆ  

ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”


“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)


ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು.


ನಾನು ನನ್ನ ನಲ್ಲನ ನಲ್ಲೆ, ಅವನ ಆಶೆಯು ನನ್ನ ಮೇಲೆ.


ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.


“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ.


ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.


ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.


ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು