Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೊರ್ದನ್ ನದಿಯ ಆಚೆ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಎಂಬ ಸ್ಥಳಗಳ ನಡುವೆ, ಅರಣ್ಯದಲ್ಲಿ ಆರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲರೆಲ್ಲರಿಗೆ ಮಾಡಿದ ಉಪದೇಶ ಮತ್ತು ಉಪನ್ಯಾಸಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜೋರ್ಡನ್ ನದಿಯ ಆಚೆ, ಪಾರಾನಿಗೂ, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬ ಊರುಗಳಿಗೂ ನಡುವೆ, ಮರುಭೂಮಿಯಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆ ಇಸ್ರಯೇಲರಿಗೆ ಮಾಡಿದ ಉಪನ್ಯಾಸಗಳು ಇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೊರ್ದನ್ ಹೊಳೆಯ ಆಚೆ, ಪಾರಾನಿಗೂ ತೋಫೆಲ್ ಲಾಬಾನ್ ಹಚೇರೋತ್ ದೀಜಾಹಾಬ್ ಎಂಬ ಸ್ಥಳಗಳಿಗೂ ನಡುವೆ, ಅರಣ್ಯದಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲ್ಯರೆಲ್ಲರಿಗೆ ಮಾಡಿದ ಉಪನ್ಯಾಸಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರಿಗೆ ಮೋಶೆಯು ಈ ಆಜ್ಞೆಗಳನ್ನು ಕೊಟ್ಟನು. ಆಗ ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ಅಡವಿಯಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇದು ಸೂಫಿಗೆ ಎದುರಾಗಿ, ಪಾರಾನಿನ ಮರುಭೂಮಿಗೂ ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಪಟ್ಟಣಗಳ ನಡುವೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೊರ್ದನ್ ನದಿಯ ಆಚೆ ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬ ಊರುಗಳ ನಡುವೆ, ಮರುಭೂಮಿಯಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ, ಮೋಶೆ ಇಸ್ರಾಯೇಲರಿಗೆ ಹೇಳಿದ ಮಾತುಗಳು ಇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:1
29 ತಿಳಿವುಗಳ ಹೋಲಿಕೆ  

ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಮೋಶೆಯು ಮನಸ್ಸೆ ಕುಲದ ಅರ್ಧ ಜನರಿಗೆ ಬಾಷಾನಿನಲ್ಲಿ ಸ್ವತ್ತನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಯೊರ್ದನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳುಹಿಸುವಾಗ


ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.


ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಯೆಹೋವನು ಮಾಡಿದ್ದೆಲ್ಲವನ್ನೂ ಕೇಳಿದ್ದಾರೆ.


ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ


“ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ನೀವು ಯೊರ್ದನ್ ನದಿಯ ಆಚೆಯಲ್ಲಿ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ನೇಮಿಸಬೇಕು. ಅವು ಆಶ್ರಯದ ಪಟ್ಟಣಗಳಾಗಿ ಇರಬೇಕು.


ಎರಡುವರೆ ಗೋತ್ರಗಳು ತಮ್ಮ ಸ್ವತ್ತನ್ನು ಯೊರ್ದನ್ ನದಿಯ ಆಚೆ ಯೆರಿಕೋ ಪಟ್ಟಣದ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ.”


ನಾವು ಯೆಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು, ಆಗ ಯೊರ್ದನ್ ನದಿಯ ಆಚೆಯೇ ನಮಗೆ ಸ್ವತ್ತು ದೊರಕಬೇಕು” ಎಂದರು.


ನಮಗೆ ಯೊರ್ದನ್ ನದಿಯ ಆಚೆ ಪೂರ್ವ ದಿಕ್ಕಿನಲ್ಲಿ ಸ್ವತ್ತನ್ನು ಅಪೇಕ್ಷಿಸುವುದಿಲ್ಲ” ಎಂದರು.


ಆದಕಾರಣ ನೀವು, ದಾಸರಾದ ನಮ್ಮ ಮೇಲೆ ದಯೆ ಇಟ್ಟು ನಮ್ಮನ್ನು ಯೊರ್ದನ್ ನದಿಯ ಆಚೆಗೆ ಬರಮಾಡಿದ ಈ ಪ್ರದೇಶವನ್ನೇ ಸ್ವತ್ತಾಗಿ ಕೊಡಬೇಕು” ಎಂದು ಕೇಳಿಕೊಂಡರು.


ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು.


ತರುವಾಯ ಅವರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳಿದುಕೊಂಡರು.


ತರುವಾಯ ಜನರು ಕಿಬ್ರೋತ್ ಹತಾವದಿಂದ ಪ್ರಯಾಣಮಾಡಿ ಹಚೇರೋತಿಗೆ ಬಂದು ಅಲ್ಲಿ ಇಳಿದುಕೊಂಡರು.


ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.


ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು.


ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.


ತೇಮಾನಿನಿಂದ ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಬರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;


ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.


ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರಿಗೆ ಗೊತ್ತಾಗದಂತೆ ಎಚ್ಚರಿಕೆಯಿಂದ ಅರಾಬದ ಮಾರ್ಗವನ್ನು ಬಿಟ್ಟು ಏಲತ್ ಮತ್ತು ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.


ಅವರು ಯೊರ್ದನ್ ನದಿಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದರು. ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.


ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ಅವರು ಮೊದಲು ಮಿದ್ಯಾನಿಗೂ, ಆ ಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಜನರು ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನೂ ಮತ್ತು ಭೂಮಿಯನ್ನೂ ಕೊಟ್ಟನು.


ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.


ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.


ಮೋಶೆ ಮತ್ತು ಇಸ್ರಾಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ನಿಮಗೆ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.


ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು.


ಮೋಶೆ ಹೋಗಿ ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು