Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ವರ್ಷದ ಪ್ರಾರಂಭ ಮೊದಲುಗೊಂಡು ಕೊನೆಯ ವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದು ನಿಮ್ಮ ದೇವರಾದ ಸರ್ವೇಶ್ವರ ಪರಾಂಬರಿಸುವ ನಾಡು; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಅವರು ಅದನ್ನು ಸದಾ ಕಟಾಕ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿಮ್ಮ ದೇವರಾದ ಯೆಹೋವನು ಆ ಭೂಮಿಯನ್ನು ಕಾಯುತ್ತಾನೆ. ಆ ದೇಶವನ್ನು ವರ್ಷದ ಪ್ರಾರಂಭದಿಂದ ಕೊನೆಯ ತನಕ ಪರಿಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದು ನಿಮ್ಮ ದೇವರಾದ ಯೆಹೋವ ದೇವರು ಪರಾಮರಿಸುವ ದೇಶವೇ; ವರ್ಷದ ಆರಂಭದಿಂದ ವರ್ಷದ ಅಂತ್ಯದವರೆಗೂ ಯಾವಾಗಲೂ ನಿಮ್ಮ ದೇವರಾದ ಯೆಹೋವ ದೇವರ ಕಣ್ಣು ಅದರ ಮೇಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:12
8 ತಿಳಿವುಗಳ ಹೋಲಿಕೆ  

ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.


ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.


ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.


ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.


ಆದರೆ ಯೆಹೂದ್ಯರು ಮತ್ತು ಹಿರಿಯರೊಂದಿಗೆ ದೇವರ ಕೃಪಾಕಟಾಕ್ಷ ಇದ್ದುದರಿಂದ ವಿಚಾರಿಸುವುದಕ್ಕೆ ಬಂದವರು ಅವರಿಗೆ ಅಡ್ಡಿಮಾಡದೆ, ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ವರ್ತಮಾನ ಮುಟ್ಟಿಸಿ, ಉತ್ತರವನ್ನು ಬರೆದು ಕಳುಹಿಸುವೆವೆಂದು ಹೇಳಿ ಹೊರಟು ಹೋದರು.


ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.


ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು.


ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು