Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವರು; ನೀವು ಆಹಾರದಿಂದ ತೃಪ್ತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಡವಿಯಲ್ಲಿ ದನಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮ ಹೊಲಗಳಲ್ಲಿ ಮತ್ತು ನಿಮ್ಮ ಪಶುಗಳಿಗೆ ಹುಲ್ಲು ಹುಲುಸಾಗಿ ಬೆಳೆಯುವಂತೆ ಮಾಡುವೆನು. ನಿಮಗೆ ಆಹಾರವು ಸಮೃದ್ಧಿಕರವಾಗಿರುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ನಿಮ್ಮ ಹೊಲದಲ್ಲಿ ಕೊಡುವರು. ನೀವು ಆಹಾರದಿಂದ ತೃಪ್ತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:15
12 ತಿಳಿವುಗಳ ಹೋಲಿಕೆ  

ತುಂಬಿದ ಮನೆಗಳನ್ನೂ, ನೀವು ತೋಡದ ನೀರುಗುಂಡಿಗಳನ್ನೂ, ನೀವು ಬೆಳಸದ ದ್ರಾಕ್ಷಿತೋಟಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ,


ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು,


ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು: “ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಅವುಗಳಿಂದ ನಿಮಗೆ ತೃಪ್ತಿಯಾಗುವುದು. ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ.


ಕಾಡುಮೃಗಗಳೇ ಅಂಜಬೇಡಿರಿ, ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು, ಮರವು ಹಣ್ಣು ಬಿಡುವುದು. ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.


ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು.


ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”


ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! ಮೇವಿಲ್ಲದ ಕಾರಣ ದನದ ಮಂದೆಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ. ಕುರಿಹಿಂಡುಗಳು ಕಷ್ಟಪಡುತ್ತವೆ.


ಇದಲ್ಲದೆ ಹೆಣ್ಣು ಜಿಂಕೆಯು ಕಾಡಿನಲ್ಲಿ ಈದು, ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ.


ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು.


ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.


ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು