ಧರ್ಮೋಪದೇಶಕಾಂಡ 12:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು. ಅಧ್ಯಾಯವನ್ನು ನೋಡಿ |
ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.
ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.