Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀವು ಸ್ವಾಧೀನಮಾಡಿಕೊಳ್ಳುವ ನಾಡಿನ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೂ ದಿಣ್ಣೆಗಳ ಮೇಲೂ ಹರಡಿಕೊಂಡ ಮರಗಳ ಕೆಳಗೂ ತಮ್ಮ ದೇವರುಗಳನ್ನು ಪೂಜಿಸುತ್ತಾರೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ ದಿನ್ನೆಗಳ ಮೇಲೆಯೂ ಹರಡಿಕೊಂಡ ಮರಗಳ ಕೆಳಗೆಯೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈಗ ಆ ಪ್ರಾಂತ್ಯದಲ್ಲಿ ವಾಸಿಸುತ್ತಿರುವ ಜನರಿಂದ ತೆಗೆದುಕೊಂಡು ನಿಮಗೆ ಅದನ್ನು ಕೊಡುತ್ತಾನೆ. ಅಲ್ಲಿ ನೀವು ಹೋದಾಗ ಆ ಜನರ ವಿಗ್ರಹಾರಾಧನೆಯ ಸ್ಥಳಗಳನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅವರ ಪೂಜಾಸ್ಥಳಗಳು ಎತ್ತರವಾದ ಬೆಟ್ಟಗುಡ್ಡಗಳ ಮೇಲೆಯೂ ಹಸುರಾಗಿರುವ ಮರಗಳ ಕೆಳಗೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಸ್ವಾಧೀನ ಮಾಡಿಕೊಳ್ಳುವ ದೇಶದ ಜನಾಂಗಗಳು ತಮ್ಮ ದೇವರುಗಳಿಗೆ ಪೂಜಿಸಿದ ಸ್ಥಳಗಳನ್ನೂ, ಬೆಟ್ಟಗಳ ಮೇಲಿನ ಎತ್ತರ ಸ್ಥಳಗಳನ್ನೂ, ಗುಡ್ಡಗಳ ಹಾಗು ಮರಗಳ ಕೆಳಗಿರುವ ಸ್ಥಳಗಳನ್ನು ನೀವು ಪೂರ್ಣವಾಗಿ ನಾಶಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:2
22 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.


ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ?


ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.


ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.


ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?


ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳ್” ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.


ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.


ಆ ವರೆಗೂ ಯೆಹೋವನ ನಾಮಕ್ಕೋಸ್ಕರ ಆಲಯವಿರಲಿಲ್ಲವಾದುದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞವನ್ನು ಆರ್ಪಿಸುತ್ತಿದ್ದರು.


ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.


ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ’ ಎಂದು ಹೇಳಬಹುದು. ಹಿಜ್ಕೀಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.


ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.


ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.


ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.


ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ, ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು