Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು, “ನಾವು ಮಾಂಸಾಹಾರವನ್ನು ಊಟಮಾಡಬೇಕು” ಎಂದು ನೀವು ಇಷ್ಟಪಟ್ಟರೆ ಮಾಂಸಾಹಾರವನ್ನು ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು ಮಾಂಸಾಹಾರವನ್ನು ಮಾಡುವುದಕ್ಕೆ ಇಷ್ಟಪಟ್ಟರೆ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು ಮಾಂಸಾಹಾರವನ್ನು ಮಾಡುವದಕ್ಕೆ ಇಷ್ಟಪಟ್ಟರೆ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20-21 “ನಿಮ್ಮ ದೇವರಾದ ಯೆಹೋವನು ನಿಮ್ಮ ದೇಶವನ್ನು ವಿಸ್ತಾರ ಮಾಡುವನು. ಆ ಸಮಯದಲ್ಲಿ ನೀವು ಇರುವ ಸ್ಥಳಗಳು ಆತನು ತನ್ನ ಹೆಸರಿಗಾಗಿ ಆರಿಸಿದ ಸ್ಥಳದಿಂದ ತುಂಬಾ ದೂರವಿರಬಹುದು. ಆಗ ನಿಮಗೆ ಮಾಂಸ ಊಟಮಾಡಲು ಆಸೆಯಾದರೆ ನಿಮ್ಮ ಹಿಂಡಿನಿಂದಾಗಲಿ ಹಟ್ಟಿಯಿಂದಾಗಲಿ ಪ್ರಾಣಿಯನ್ನು ಕೊಂದು ತಿನ್ನಬಹುದು. ನಾನು ತಿಳಿಸುವ ರೀತಿಯಲ್ಲಿ ತಿನ್ನಿರಿ. ನಿಮಗೆ ಬೇಕಾದಾಗಲೆಲ್ಲಾ ಹೀಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆ ನಿಮ್ಮ ಮೇರೆಯನ್ನು ವಿಸ್ತಾರಮಾಡುವರು. ಆಗ ನೀವು, “ಮಾಂಸಾಹಾರವನ್ನು ತಿನ್ನಲು ಇಷ್ಟಪಡುತ್ತೇನೆ,” ಎಂದು ಹೇಳಿದರೆ, ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:20
24 ತಿಳಿವುಗಳ ಹೋಲಿಕೆ  

ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ತಾನು ನಿಮ್ಮ ಪೂರ್ವಿಕರಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವಾಗ, ಇನ್ನೂ ಮೂರು ನಗರಗಳನ್ನು ನಿಮಗಾಗಿ ಗೊತ್ತುಮಾಡಬೇಕು. ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ,


ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳು ನಿಮ್ಮದಾಗುವವು. ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದ ವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವುದು.


ನಾನು ನಿಮ್ಮ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ನೀವು ವರ್ಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂಮಿಯನ್ನು ಆಶೆಪಟ್ಟು ಅಪಹರಿಸುವುದಿಲ್ಲ.


ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.


ಆತನು ಬಾಯಾರಿದವರ ಆಶೆಯನ್ನು ಪೂರೈಸಿ, ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.


ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.


ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.


ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.


ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆ ಮಾಡಿ ದೇವರ ಅತಿಶಯವಾದ ಕೃಪೆಯು ನಿಮಗೆ ದೊರೆತಿರುವುದರಿಂದ ಅವರು ನಿಮ್ಮನ್ನು ನೋಡಲು ಬಯಸಿರುವರಲ್ಲದೆ ನಿಮಗಾಗಿ ಪ್ರಾರ್ಥಿಸುವರು.


ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.


ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ, ನಿನ್ನ ನೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. ವಾವ್.


ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.


ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.


ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.


ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದೂ ಕೇಳಿದನು.


ಅರಸನಾದ ದಾವೀದನು ಅಮ್ನೋನನ ಮರಣದ ವಿಷಯವಾಗಿ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು.


ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು.


ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.


ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು?


ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.


ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕಾಗಿ ಆರಿಸಿಕೊಂಡ ಸ್ಥಳವು ನಿಮಗೆ ದೂರವಾದರೆ, ಆತನು ನಿಮಗೆ ಅನುಗ್ರಹಿಸಿದ ದನ ಮತ್ತು ಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು