Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಸಮರ್ಪಿಸುವ ದಹನಬಲಿ ಮುಂತಾದ ಯಜ್ಞಗಳ ಪಶುಪ್ರಾಣಿಗಳನ್ನು, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನು ಪ್ರತ್ಯೇಕಿಸುವ ಪದಾರ್ಥಗಳನ್ನು ಮತ್ತು ಹರಕೇಮುಡುಪುಗಳನ್ನು, ಕಾಣಿಕೆಗಳನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ಆ ಸ್ಥಳಕ್ಕೆ ಮಾತ್ರ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಸ್ಥಳಕ್ಕೆ ಮಾತ್ರ ನೀವು ಸಮರ್ಪಿಸುವ ಸರ್ವಾಂಗಹೋಮಗಳೇ ಮುಂತಾದ ಯಜ್ಞಗಳ ಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೇ ಮುಡುಪುಗಳನ್ನೂ ಕಾಣಿಕೆಗಳನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ತಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ, ನಿಮ್ಮ ಅರ್ಪಣೆಗಳನ್ನೂ, ನಿಮ್ಮ ಬೆಳೆಯನ್ನೂ, ದಶಮಾಂಶಗಳನ್ನೂ, ನಿಮ್ಮ ಹರಕೆಗಳನ್ನೂ, ಉಚಿತವಾದ ಕಾಣಿಕೆಗಳನ್ನೂ, ನಿಮ್ಮ ಚೊಚ್ಚಲಾದ ದನಕುರಿಗಳನ್ನೂ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:6
22 ತಿಳಿವುಗಳ ಹೋಲಿಕೆ  

ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.


“ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.


ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.


“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.


ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.


ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.


“‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.


ಆದರೆ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವುದಕ್ಕೋಸ್ಕರ ನಮಗೂ ಹಕ್ಕಿದೆ ಎಂಬುದಕ್ಕೆ ಇದು ನಮಗೂ, ನಿಮಗೂ, ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವುದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವುದಕ್ಕೆ ಆಸ್ಪದವಿರುವುದಿಲ್ಲ.


ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು.


ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.


ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.


ಎಲ್ಕಾನನು ಎಂದಿನಂತೆ ಕುಟುಂಬ ಸಹಿತವಾಗಿ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸಿ ಹರಕೆಸಲ್ಲಿಸಬೇಕೆಂದು ಶೀಲೋವಿಗೆ ಹೋಗುವುದಕ್ಕೆ ಸಿದ್ಧನಾಗಲು ಹನ್ನಳು


ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ.


ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು.


ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು