Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದರಲ್ಲಿ ಇರುವ ಎಲ್ಲ ಸಾಮಗ್ರಿಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ, ಅದರಲ್ಲಿರುವ ಎಲ್ಲ ಸಾಮಾನುಗಳನ್ನೂ ನಿಮ್ಮ ದೇವರಾದ ಸರ್ವೇಶ್ವರನಿಗೆ ನಿಶ್ಯೇಷವಾಗಿ ಸುಟ್ಟುಬಿಡಬೇಕು. ಅದು ಪುನಃ ಯಾವಾಗಲೂ ಹಾಳುದಿಬ್ಬವಾಗಿರಬೇಕು. ಅದನ್ನು ಪುನಃ ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ನಿಶ್ಶೇಷವಾಗಿ ಸುಟ್ಟುಬಿಡಬೇಕು. ಅದು ತಿರಿಗಿ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವು ಆ ಪಟ್ಟಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಪಟ್ಟಣದ ಮಧ್ಯದಲ್ಲಿ ತಂದುಹಾಕಿ ಅದಕ್ಕೆ ಬೆಂಕಿಹೊತ್ತಿಸಿ ಇಡೀ ಪಟ್ಟಣವನ್ನು ಬೆಂಕಿಯಿಂದ ಸುಡಬೇಕು. ಇದು ದೇವರಾದ ಯೆಹೋವನಿಗೆ ಸರ್ವಾಂಗಹೋಮವಾಗುವುದು. ಆ ಪಟ್ಟಣವು ಕಲ್ಲುಗಳ ರಾಶಿಯಾಗಿ ಪರಿಣಮಿಸುವುದು ಮತ್ತು ಯಾರೂ ಆ ಪಟ್ಟಣವನ್ನು ಮತ್ತೆ ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಆ ಊರಿನ ಎಲ್ಲಾ ಸಾಮಗ್ರಿಗಳನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ, ಆ ಪಟ್ಟಣವನ್ನೂ, ಅದರ ಎಲ್ಲಾ ವಸ್ತುವನ್ನೂ ಸಂಪೂರ್ಣವಾಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಯಾಗಿ ಸುಟ್ಟುಬಿಡಬೇಕು. ಅದು ಎಂದಿಗೂ ಹಾಳುದಿಬ್ಬವಾಗಿರಬೇಕು; ಇನ್ನು ಮೇಲೆ ಅದನ್ನು ಕಟ್ಟಬಾರದು; ಆ ಶಾಪಗ್ರಸ್ತ ವಸ್ತುಗಳಲ್ಲಿ ಏನನ್ನೂ ತೆಗೆದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:16
13 ತಿಳಿವುಗಳ ಹೋಲಿಕೆ  

ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”


ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಎಂದಿಗೂ ತಿರುಗಿ ಕಟ್ಟಲು ಸಾಧ್ಯವಾಗದಂತೆ ಹಾಳುದಿಬ್ಬವನ್ನಾಗಿ ಮಾಡಿದನು. ಅದು ಇಂದಿನ ವರೆಗೂ ಹಾಗೆಯೇ ಉಳಿದಿದೆ.


ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ.


ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.


ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಆದರೆ ಬೆಳ್ಳಿಬಂಗಾರವನ್ನೂ, ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು.


ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು.


ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ “ಈ ಯೆರಿಕೋ ಪಟ್ಟಣವನ್ನು ಕಟ್ಟುವುದಕ್ಕೆ ಕೈ ಹಾಕುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ” ಎಂದು ಹೇಳಿದನು.


ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.


ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.


ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.


ಪಟ್ಟಣದಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ, ಹುಡುಗರನ್ನೂ, ಮುದುಕರನ್ನೂ, ದನ, ಕುರಿ ಕತ್ತೆಗಳನ್ನೂ ಸಂಪೂರ್ಣವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು