ಧರ್ಮೋಪದೇಶಕಾಂಡ 14:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯಾಕಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಜನರೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವದಕ್ಕೆ ಆದುಕೊಂಡಿದ್ದಾನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.