Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಸತ್ತುಬಿದ್ದ ಯಾವ ಪ್ರಾಣಿಯನ್ನಾಗಲೀ ತಿನ್ನಬಾರದು. ನಿಮ್ಮ ಊರಲ್ಲಿರುವ ಪರದೇಶಿಗೆ ಕೊಡಿರಿ. ಅವನು ತಿನ್ನಬಹುದು, ಅಥವಾ ಆ ಸತ್ತ ಪ್ರಾಣಿಯನ್ನು ಪರದೇಶಿಗೆ ಮಾರಬಹುದು. ಆದರೆ ನೀವು ತಿನ್ನಬಾರದು. ಯಾಕೆಂದರೆ ನೀವು ಯೆಹೋವನ ಜನರಾಗಿದ್ದೀರಿ; ಆತನ ಸ್ವಕೀಯ ಪ್ರಜೆಗಳಾಗಿದ್ದೀರಿ. ಆಡಿನ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ತಾನೇ ಸತ್ತ ಯಾವುದನ್ನೂ ತಿನ್ನಬಾರದು. ನಿಮ್ಮ ಊರಲ್ಲಿರುವ ಅನ್ಯನಿಗೆ ತಿನ್ನಲು ಕೊಡಬಹುದು ಇಲ್ಲವೆ ಪರದೇಶದವನಿಗೆ ಮಾರಬಹುದು. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಕುದಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:21
19 ತಿಳಿವುಗಳ ಹೋಲಿಕೆ  

ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”


ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.


ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.


“‘ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.


ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು,


ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.


ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು.


ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.


ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.


ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.


ರೆಕ್ಕೆಯುಳ್ಳವುಗಳಲ್ಲಿ ಶುದ್ಧ ಜಾತಿಯವುಗಳನ್ನು ಮಾತ್ರ ನೀವು ತಿನ್ನಬಹುದು.


ಯಾಜಕರು ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಅಥವಾ ಪಶುವನ್ನಾಗಲಿ ತಿನ್ನಬಾರದು.”


ಅದರಂತೆಯೇ ನಿಮ್ಮ ಕುರಿ, ದನಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿನಗಳ ಕಾಲ ಆ ಮರಿ ತನ್ನ ತಾಯಿಯೊಂದಿಗಿರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು