Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪ್ರತಿಯೊಬ್ಬನು ತನಗೆ ಸರ್ವೇಶ್ವರ ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತಿಗೆ ಅನುಸಾರ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯನುಸಾರ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರತಿಯೊಬ್ಬನೂ ಯೆಹೋವನು ತನ್ನನ್ನು ಆಶೀರ್ವದಿಸಿದ ಮೇರೆಗೆ ಆತನಿಗೆ ಕಾಣಿಕೆಯನ್ನರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:17
10 ತಿಳಿವುಗಳ ಹೋಲಿಕೆ  

ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.


ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.


ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.


ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ತೀರ್ಪುಮಾಡಿದನು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.


ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.


ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.


ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು