Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ಊರುಗಳೊಂದರಲ್ಲಿ ಒಬ್ಬ ಪುರುಷ ಅಥವಾ ಸ್ತ್ರೀ ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನೆಯನ್ನು ಮೀರಿದ್ದಾರೆ ಎಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಒಂದು ಪಟ್ಟಣದಲ್ಲಿ ನೀವು ಕೆಟ್ಟ ಸುದ್ದಿಯೊಂದನ್ನು ಅಂದರೆ ಒಬ್ಬ ಸ್ತ್ರೀಯಾಗಲಿ ಅಥವಾ ಪುರುಷನಾಗಲಿ ದೇವರೊಂದಿಗೆ ಮಾಡಿದ ಒಡಂಬಡಿಕೆಯನ್ನು ಮುರಿದು ಆತನಿಗೆ ವಿರುದ್ಧವಾಗಿ ಪಾಪಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ ಅವರ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ನಡೆಸಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:2
26 ತಿಳಿವುಗಳ ಹೋಲಿಕೆ  

“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.


ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.


ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.


ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.


ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು’” ಎಂದು ಹೇಳು ಎಂಬುದೇ.


ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಕೊಳ್ಳೆಯಲ್ಲಿ ಮೀಸಲಾದ ವಸ್ತುಗಳನ್ನು ಕದ್ದು ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾಗಿದ್ದಾರೆ.


ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.


ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.


ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.


ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.


“ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.


ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.


ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,


ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.


ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.


ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಇದು ಸಹ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು, ಮೇಲಣ ಲೋಕದ ದೇವರಿಗೆ ದ್ರೋಹಿಯಾದಂತಾಯಿತು.


ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಮುಂದೆ ಮಾಡಿದ ಒಡಂಬಡಿಕೆಯನ್ನು ಮೀರಿದವರಿಗೆ ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗುವ ಗತಿ ಬರುವಂತೆ ಮಾಡುವೆನು.


ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ, “ಬಾಳನಿಗೋಸ್ಕರ ನೀವು ವ್ಯಾಜ್ಯಮಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯಮಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಬಾಳನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯಮಾಡಲಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು