Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಪುರುಷನನ್ನು ಅಥವಾ ಆ ಸ್ತ್ರೀಯನ್ನು ಹಿಡಿದು, ಊರ ಹೊರಗೆ ತಂದು, ಕಲ್ಲುಬೀರಿ ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲುಗಳಿಂದ ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಪಾಪಮಾಡಿದವನಿಗೆ ಶಿಕ್ಷೆಯನ್ನು ವಿಧಿಸಬೇಕು. ಪಟ್ಟಣದ ಹೆಬ್ಬಾಗಿಲ ಹೊರಗಿರುವ ಬಯಲಿಗೆ ಆ ತಪ್ಪು ಮಾಡಿದ ಸ್ತ್ರೀಯನ್ನೂ, ಪುರುಷನನ್ನೂ ತೆಗೆದುಕೊಂಡು ಹೋಗಿ ಅಲ್ಲಿ ಅವರನ್ನು ಕಲ್ಲೆಸೆದು ಸಾಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ನೀವು ಆ ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಊರ ಹೊರಗೆ ತಂದು, ಅವರು ಸಾಯುವಂತೆ ಅವರ ಮೇಲೆ ಕಲ್ಲೆಸೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:5
13 ತಿಳಿವುಗಳ ಹೋಲಿಕೆ  

“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಆಗ ಯೆಹೋಶುವನು ಆಕಾನನಿಗೆ “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು” ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.


ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ,


ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ, “ಬಾಳನಿಗೋಸ್ಕರ ನೀವು ವ್ಯಾಜ್ಯಮಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯಮಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಬಾಳನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯಮಾಡಲಿ” ಎಂದನು.


ಇದು ಸಹ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು, ಮೇಲಣ ಲೋಕದ ದೇವರಿಗೆ ದ್ರೋಹಿಯಾದಂತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು