Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸ್ವದೇಶಸ್ಥರೊಂದಿಗೂ ಅವರಿಗೆ ಸ್ವತ್ತು ದೊರೆಯುವುದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವತ್ತಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸ್ವದೇಶದವರಿಗೆ ದೊರಕುವಂತೆ ಅವರಿಗೆ ಸೊತ್ತು ದೊರಕುವುದಿಲ್ಲ. ಸರ್ವೇಶ್ವರ ಸ್ವಾಮಿಯೇ ಲೇವಿಯರ ಸೊತ್ತು. ಇದನ್ನು ಸ್ವಾಮಿಯೇ ಅವರಿಗೆ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸ್ವದೇಶಸ್ಥರೊಂದಿಗೆ ಅವರಿಗೆ ಸ್ವಾಸ್ತ್ಯವು ದೊರೆಯುವದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವಾಸ್ತ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬೇರೆ ಕುಲದವರಂತೆ ಅವರಿಗೆ ಭೂಮಿ ದೊರೆಯುವುದಿಲ್ಲ. ದೇವರು ಹೇಳಿದ ಪ್ರಕಾರ ಅವರ ಪಾಲು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಲೇವಿಯರಿಗೆ ಅವರ ಸಹೋದರರ ಮಧ್ಯದಲ್ಲಿ ಸೊತ್ತಿರಬಾರದು. ಯೆಹೋವ ದೇವರು ಅವರಿಗೆ ಹೇಳಿದ ಹಾಗೆ ದೇವರೇ ಅವರ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:2
15 ತಿಳಿವುಗಳ ಹೋಲಿಕೆ  

ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


“ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು” ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.


ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ಯೆಹೋವನೇ, ನನ್ನ ಪಾಲು ನೀನೇ, ನಿನ್ನ ವಾಕ್ಯಗಳನ್ನು ಕೈಗೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ.


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.


ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ.


ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು.


ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು.


“ಅವರಿಗೆ ಇದು ಸ್ವಾಸ್ತ್ಯವಾಗುವುದು, ನಾನೇ ಅವರ ಸ್ವತ್ತು; ಇಸ್ರಾಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು; ನಾನೇ ಅವರಿಗೆ ಆಸ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು