Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಜನರಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ : ದನಕರುಗಳನ್ನು ಹಾಗು ಆಡುಕುರಿಗಳನ್ನು ಕೊಯ್ದು ಬಲಿದಾನ ಮಾಡುವವರೆಲ್ಲರು ಆ ಪಶುಗಳ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವವಂದರೆ - ದನಗಳಲ್ಲಿಯಾಗಲಿ ಆಡುಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನೀವು ಯಜ್ಞಕ್ಕಾಗಿ ಒಂದು ದನವನ್ನಾಗಲಿ ಕುರಿಯನ್ನಾಗಲಿ ಕೊಯ್ದಾಗ ಯಾಜಕರಿಗೆ ಭುಜವನ್ನು, ಎರಡು ದವಡೆಗಳನ್ನು ಮತ್ತು ಉದರ ಭಾಗವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎತ್ತನ್ನಾಗಲಿ, ಕುರಿಯನ್ನಾಗಲಿ ಬಲಿ ಅರ್ಪಿಸುವವರಿಂದ ಯಾಜಕರಿಗೆ ಸಿಕ್ಕುವ ಪಾಲು, ಅವುಗಳ ಮುಂದೊಡೆ, ದವಡೆ ಹಾಗೂ ಒಳಗಿನ ಭಾಗಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:3
7 ತಿಳಿವುಗಳ ಹೋಲಿಕೆ  

ಸರ್ವಾಂಗ ಹೋಮಗಳನ್ನು ಸಮರ್ಪಿಸುವಾಗ, ರಕ್ತ ಮಾಂಸಗಳೆರಡನ್ನೂ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯಲ್ಲಿ ದಹಿಸಿಬಿಡಬೇಕು. ಸಮಾಧಾನ ಯಜ್ಞಗಳನ್ನು ಮಾಡುವಾಗ ರಕ್ತವನ್ನು ಆತನ ಯಜ್ಞವೇದಿಯ ಮೇಲೆ ಸುರಿದುಬಿಟ್ಟು ಮಾಂಸವನ್ನು ಊಟಮಾಡಬೇಕು.


“ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.


ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.


ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.


ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.


ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು