Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನು ಆ ಮತ್ತೊಬ್ಬನಿಗೆ ಮಾಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೇ ವಿಧಿಸಬೇಕು. ಹೀಗೆ, ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಸಾಕ್ಷಿಯವನಿಗೆ ಶಿಕ್ಷೆ ವಿಧಿಸಬೇಕು. ತನ್ನ ವಿರೋಧಿಗೆ ಯಾವ ಶಿಕ್ಷೆ ಬರಬೇಕೆಂಬುದಾಗಿ ಅವನು ಸುಳ್ಳಾಡಿದ್ದನೋ, ಅದೇ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಈ ರೀತಿಯಾಗಿ ಆ ದುಷ್ಟತನವನ್ನು ನಿಮ್ಮ ಕುಲಗಳಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ತನ್ನ ಸಹೋದರನಿಗೆ ಮಾಡುವುದಕ್ಕೆ ಯೋಚಿಸಿದ ಪ್ರಕಾರವೇ ಅವನಿಗೆ ಶಿಕ್ಷೆ ಕೊಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:19
13 ತಿಳಿವುಗಳ ಹೋಲಿಕೆ  

ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.


ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.


ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.


ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.


ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.


ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಅಂಥ ದುಷ್ಟತ್ವವನ್ನು ನಡೆಸುವುದಿಲ್ಲ.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,


ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು